Monday, November 2, 2009

ಮುಖ ಮುಖವಾಡಕ್ಕೆ ಬಲಿಯಾಗಿದೆ

ಓ ಮನಸೇಯಲ್ಲಿ ನಾನು ಅತ್ಯಂತ ಪ್ರೀತಿಯಿಂದ ಬರೆಯುವ ಕಾಲಂ ಇನ್ಬಾಕ್ಸ್. ಹಾಗೇ ಹೆಚ್ಚು ತಲೆಕೆಡಿಸಿಕೊಂಡು ಬರೆಯುವ ಕಾಲಂ ಸಹ ಅದೆ. ಅದಕ್ಕೆ ಅದರದೇ ಆದ ಸಾವಿರಾರು ಓದುಗರಿದ್ದಾರೆ. ಅಭಿಮಾನಿಗಳಿದ್ದಾರೆ. ಕೆಲಸದ ಒತ್ತಡದಿಂದಲೋ ಅಥವಾ ನನ್ನ ಸೋಮಾರಿತನದಿಂದಲೋ ಒಂದಷ್ಟು ಕಾಲ ಬರೆಯಲಾಗಿರಲಿಲ್ಲ. ರವಿ ಬೆಳಗೆರೆ ಕೂಡ ಅದೇನೋ ಇನ್ಬಾಕ್ಸ್ ಅಂತ ಬರಿತೀರಲ್ಲ ರವಿ ಅದಕ್ಕೆ ತುಂಬಾ ಜನ ಓದುಗರಿದ್ದಾರೆ ಮತ್ತೆ ಬರೀರಿ ಅನ್ನುವ ಪ್ರೀತಿ ತೋರಿಸಿದ್ದರು. ಆದರೆ ನನಗೇ ಯಾಕೋ ಸಾಧ್ಯವಾಗಿರಲಿಲ್ಲ. ಕೆಲವೊಮ್ಮೆ ಬರೀಬೇಕು ಅನ್ನುವ ತುಡಿತ ಇದ್ದರೂ ಮನಸು ಚಂಡಿ ಹಿಡಿದು ಕುಳಿತುಬಿಡುತ್ತದೆ. ಜಪ್ಪಯ್ಯ ಅಂದರೂ ಒಂದು ಸಾಲು ಬರೆಯಲಾಗುವುದಿಲ್ಲ. ಎಲ್ಲಾ ಸರಿ ಇದೆ ಇನ್ನೇನು ಬರೆದುಬಿಡೋಣ ಅಂತ ಕೂತರೆ ಇನ್ನೇನೋ ಅವಾಂತರ. ಒಟ್ಟಿನಲ್ಲಿ ಇನ್ಬಾಕ್ಸ್ಗೆ ಕಲ್ಲುಬಿದ್ದಿತ್ತು.
ಈಗ ಮತ್ತೆ ಎರಡು ಸಂಚಿಕೆಯಿಂದ ಬರೆಯಲು ತೊಡಗಿದ್ದೇನೆ. ಅದೇ ಶ್ರದ್ಧೆಯಿಂದ ಅದೇ ಪ್ರೀತಿಯಿಂದ. ಓದಿಕೊಳ್ಳಿ.

ಇನ್ನು
ಕಾರಣ ಸಾಕು
ಆಚೆ ಹೋಗು
ಎದೆಯಿಂದ
ಅಲ್ಲೀಗ
ಪಟ್ಟಾಭಿಷೇಕ
ನಡೆಯುತ್ತಿದೆ
ಇನ್ನೊಬ್ಬನಿಗೆ
*
ನೆಲ
ಅಗೆದು
ನೀರು ಕೊಡಬಲ್ಲೆ
ಎದೆ ಬಗೆದು
ಹೇಗೆ ಕೊಡಲಿ
ರಕುತ
*
ನೀನು
ಎಲ್ಲಾ ಕೇಳಿದೆ
ನನ್ನ ಬಳಿ
ಪ್ರೀತಿಯೊಂದನ್ನು
ಬಿಟ್ಟು
*
ನನಗೊಂದು
ಆಸೆ ಇದೆ
ನಿನ್ನ
ತೋಳ ತೆಕ್ಕೆಯಲಿ
ಸಾಯಬೇಕೆಂದು
*
ಪ್ರೀತಿ ಅಂದರೆ
ದೇವರ
ಕಾಲ ಕೆಳಗಿನ
ಹೂವಲ್ಲ
ಅದು
ನೀಲಾಂಜನ
*
ನಾವು
ಕಾಮವನ್ನು
ಬಿಡಬಹುದು
ಕಾಮ
ನಮ್ಮನ್ನು
ಬಿಡೋಲ್ಲ
*
ನನಗೆ
ಅಳುವುದಕ್ಕೆ ಬಿಡು
ದೇವರೇ
ಇನ್ನಾದರೂ
ಅವಳ
ನೆನಪು
ಸಾಯಲಿ
*
ಕಷ್ಟ ಬಂದಾಗ
ದೇವರೇ
ನನಗೊಂದು
ದೊಡ್ಡ
ಕಷ್ಟ ಇದೆ
ಏನು ಮಾಡಲಿ
ಅನ್ನಬೇಡಿ
ಕಷ್ಟವೇ
ನನ್ನಲ್ಲಿ
ದೊಡ್ಡ ದೇವರಿದ್ದಾನೆ ಎನ್ನಿ
*
ಗೊತ್ತಾಗುತ್ತೆ ಬಿಡು
ನಿನಗೂ
ಒಡೆದ ಹೃದಯದ
ನೋವು
ಏನೆಂದು!
*
ಸೋಲುವುದು
ಸುಲಭ
ಗೆಲ್ಲುವುದು ಕಷ್ಟ
ಅದಕ್ಕೆ
ನಾನು ನಿನಗೆ
ಸೋತಿದ್ದು
*
ತುಂಬಾ ಜನ
ಪ್ರಪೋಸ್ ಮಾಡಿದ್ರು
ನಂಗೆ ಇಷ್ಟ ಇಲ್ಲ ಅಂದೆ
ಈಗ
ಅವರೆಲ್ಲ
ಸುಖವಾಗಿದಾರೆ
*
ನೀನು ಕೊಟ್ಟ
ಗುಲಾಬಿ
ಬಣ್ಣ
ಕಳಕೊಂಡಿದೆ
*
ಎಂದಿಗಿಂತ
ಇಂದು
ರುಚಿಯಾಗಿತ್ತು ಕಣೆ
ಕಾಫಿ
ನಿನ್ನ
ಪ್ರೀತಿ
ಬೆರೆಸಿದ್ಯಾ?
*
ನಿನಗೊಂದು
ಮಾತೂ ಹೇಳದೆ
ಸತ್ತು ಹೋಗಬಹುದು
ನಾನು
ಡೋಂಟ್ ವರಿ
ಸತ್ತ ಮೇಲೂ
ನಿನ್ನ
ಪ್ರೀತಿಸುವುದಿದ್ದರೆ
ಅದು
ನಾನು ಮಾತ್ರ
*
ಪ್ರತಿ ಕಣ್ಣೀರೂ
ದುಃಖದ್ದಲ್ಲ
ಪ್ರತಿ ನಗುವೂ
ಸುಖದ್ದಲ್ಲ
ಪ್ರತಿ ಮೌನವೂ
ಏಕಾಂತದ್ದಲ್ಲ
ಮುಖ
ಮುಖವಾಡಕ್ಕೆ
ಬಲಿಯಾಗಿದೆ
*
ದೇವರು
ಒಂದು ಹೂ ಮಾಡಿ
ಜೇನಿನಲ್ಲಿ ಅದ್ದಿ
ಇಟ್ಕೋ ಅಂತ ಕೊಟ್ಟ
ಅದು
ನೀನೇ ಕಣೆ
*
ಒದ್ದೆಯಾದ
ಮಣ್ಣ ಮೇಲೆ ನಿಂತು
ಆಚೆ ಬಂದಾಗಲೂ
ಉಳಿದುಬಿಡುತ್ತದಲ್ಲ
ಗುರುತು
ಹಾಗೇ ಪ್ರೀತಿ
*
ಪುಟ್ಟ ಕಥೆ ಹೇಳ್ತೀನಿ
ಅವನು ನಕ್ಕ
ಇವಳೂ ನಕ್ಕಳು
ಮಗು ಮಾತ್ರ
ಅಳ್ತಿತ್ತು
*
ಮಳೆ ಅಂದ್ರೆ
ಇಷ್ಟ ಅಂದವರೆ
ಬಂದಾಗ
ಛತ್ರಿ ಹುಡುಕ್ತಾರೆ
ಸೂರ್ಯ ಅಂದ್ರೆ
ಇಷ್ಟ ಅಂದವರೆ
ನೆರಳು ಹುಡುಕ್ತಾರೆ
ತಂಗಾಳಿ ಬೀಸಲಿ
ಅಂದವರೆ
ಬಂದಾಗ ಕಿಟಕಿ ಹಾಕ್ತಾರೆ
ಅದಕ್ಕೇ ಗೆಳೆಯ
ಯಾರಾದ್ರೂ
ಐ ಲವ್ ಯೂ
ಅಂದಾಗೆಲ್ಲ
ನನಗೆ ಭಯ
*
ಏನೂ
ಕೊಡಬೇಡ
ಕೇವಲ
ಪ್ರೀತಿಯ
ಹೊರತು
*
ಪ್ರೀತಿ
ಸುಲಭವೂ ಅಲ್ಲ
ಕಷ್ಟವೂ ಅಲ್ಲ
ಅದು ಹಗ್ಗದ
ಮೇಲಿನ ನಡಿಗೆ
*
ನಿಜ ಹೇಳ್ತೀನಿ
ನಾನು ಬಡವನಾಗಲು
ನಿನ್ನ ಬ್ಯೂಟಿಯೇ ಕಾರಣ
ನಿನಗೆ
ಕಾಸ್ಮೆಟಿಕ್ಸ್ ಕೊಡಿಸಲಿಲ್ಲ ಅಂದ್ರೆ
ಬೆಂಗಳೂರಲ್ಲೊಂದು
ಸೈಟ್ ಮಾಡ್ತಿದ್ದೆ
*
ಮೊನ್ನೆ ಕೇಳಬೇಕು ಅಂತಿದ್ದೆ
ಆಗಲಿಲ್ಲ
ನಿನ್ನೆ ಕೇಳಬೇಕು ಅಂತಿದ್ದೆ
ಆಗಲಿಲ್ಲ
ಇವತ್ತು ಕೇಳ್ತಿದೀನಿ ಕಣೋ
ನನ್ನ ಮರೆತು ಬಿಡು
ನನಗೆ ಪ್ರೀತಿಯೆಂದರೆ
ಕೇವಲ ಶೋಕಿಯಲ್ಲ
*
ಕೆಲವರು
ಬದುಕು
ಬಿಸಾಕಿ ಎದ್ದು ಹೋಗಿದ್ದು
ಬಾಳಲಿಕ್ಕಾಗಲ್ಲ ಅಂತಲ್ಲ
ನಾವೇ
ಬಿಡಲಿಲ್ಲ ಅಂತ

ನೂರು ರುಪಾಯಿಗೆ ಏನು ಬರುತ್ತೆ?

ಮೊನ್ನೆ ಸಂಜೆ ಯಾಕೋ ಫುಲ್ ಅಜರ್ೆಂಟಾಗಿ ಒಂದು ಟೀ ಕುಡಿಯಬೇಕೆನಿಸಿತು. ಒಮ್ಮೊಮ್ಮೆ ಯಾಕೆ ಹಾಗನ್ನಿಸುತ್ತದೆ ಅಂತ ನನಗೂ ಗೊತ್ತಿಲ್ಲ. ಬೇಜಾರಗಲಿಕ್ಕೆ, ತಲೆ ನೋವು ಬರಲಿಕ್ಕೆ ಆಫೀಸಿನಲ್ಲಿ ಬೇಜಾನ್ ಕಾರಣಗಳಿವೆ ಬಿಡಿ. ಆದರೆ ಅವತ್ತು ಅಂಥದ್ದೇನೂ ನಡೆದಿರಲಿಲ್ಲ.
ಆಫೀಸಿನ ಪಕ್ಕದಲ್ಲೊಂದು ಬೇಕರಿ ಇದೆ. ಅದು ಮರಳುಗಾಡಿನಲ್ಲಿ ಸಿಕ್ಕ ಓಯಸಿಸ್ ಥರ. ಅಲ್ಲಿಗೆ ಹೋಗಿ ಒಂದು ಟೀ ಹೇಳಿ ನಿಂತುಕೊಂಡೆ. ಬ್ಲೂ ಜೀನ್ಸ್ ಬ್ಲ್ಯಾಕ್ ಟೀಶಟರ್್ ತೊಟ್ಟಿದ್ದ ಚೆಲುವೆಯೊಬ್ಬಳು ಬಂದು ಎರಡು ಲೀಟರ್ ಪೆಪ್ಸಿ, ಎರಡು ಲೀಟರ್ ಮಿರಿಂಡಾ, ಎಡು ಲೀಟರ್ ಕೋಕ್ ತೆಗೆದುಕೊಂಡು ಹೋದಳು. ಅವಳು ಆ ಕಡೆ ಹೋದ ಮೇಲೆ ಅಂಗಡಿಯಾತ ಯಾತಕ್ಕೋ ನಕ್ಕ. ಏನ್ರಿ ಅಷ್ಟೊಂದು ಕುಡಿತಾರಾ? ಅಂದೆ. ಸ್ನಾನಕ್ಕಿರಬೇಕು ಸಾರ್ ಅಂದು ಆತ ಮತ್ತೆ ಫಕಫಕನೆ ನಕ್ಕ.
ಕೈಗೆ ಟೀ ಬರುವಷ್ಟರಲ್ಲಿ ಒಂದು ಮಗು ನೂರು ರುಪಾಯಿಯ ನೋಟು ಹಿಡಿದುಕೊಂಡು ಓಡೋಡಿ ಬಂತು. ಅದರ ಅಮ್ಮ ಮತ್ತು ಚಿಕ್ಕ ತಂಗಿ ಇನ್ನೂ ಆ್ಯಕ್ಟೀವಾದಿಂದ ಇಳಿದಿರಲೇ ಇಲ್ಲ. ಆಗಲೇ ಈ ಪೋರಿ ಈ ನೂರು ರುಪಾಯಿಗೆ ಏನು ಬರುತ್ತೆ ಅಂಕಲ್ ಅಂತ ಮೂರು ಸಲ ಕೇಳಿದ್ದಳು. ಅಂಗಡಿಯಾತ ಮಲಯಾಳಿ. ಅವನಿಗೆ ಏನು ಅರ್ಥ ಆಯಿತೋ ಅರ್ಥ ಆಗಲಿಲ್ಲವೋ! ಮಗುವಿನ ಮಾತಿಗೆ ಪ್ರತಿಕ್ರಿಯಿಸಲಾಗದೇ ಸುಮ್ಮನೆ ನಿಂತಿದ್ದ. ಮಗು ಮತ್ತೆ ಕೇಳಿತು, ಅಲ್ಲಿದ್ದ ತಿಂಡಿಯನ್ನೆಲ್ಲ ಒಮ್ಮೆ ನೋಡುತ್ತಾ... ನೂರು ರುಪಾಯಿಗೆ ಏನು ಬರುತ್ತೆ ಅಂಕಲ್ ?
ಅಂದರೆ ಆ ಮಗುವಿಗೆ ನೂರು ರುಪಾಯಿಗೆ ಅಂಥದ್ದೇನೂ ಬರೋಲ್ಲ ಅಂತ ಗೊತ್ತಾಗಿದೆಯೇ? ನೋ ಐಡಿಯಾ!
ಅಷ್ಟರಲ್ಲಿ ಅವರ ಅಮ್ಮ ಹೆಲ್ಮೆಟ್ಟೂ ತೆಗೆಯದೇ ಪರ ಲೋಕದಿಂದ ಬಂದ ಏಲಿಯನ್ಸ್ ಥರ ಇನ್ನೊಂದು ಚಿಕ್ಕ ಮಗುವಿನ ಕೈ ಹಿಡಿದುಕೊಂಡು ಬಂದಳು. ಮಗುವಿನ ಕೈಯಲ್ಲಿದ್ದ ನೂರು ರುಪಾಯಿ ಇಸಿದುಕೊಂಡು ಏನು ಬೇಕು ಬೇಗ ಹೇಳು? ಅಂತ ಅವಸರವಸರ ಮಾಡಿದಳು.
ಚಿಕ್ಕದು ದೊಡ್ಡದಕ್ಕಿಂತ ಹುಷಾರು. ನನಗೆ ಜೆಮ್ಸ್ ಬೇಕು. ಫ್ರೂಟಿ ಬೇಕು, ಕುರುಕುರೆ ಬೇಕು ಅಂತೆಲ್ಲ ಕೈ ಬೆರಳು ಎಣಿಸುತ್ತಾ ಪಟ್ಟಿಮಾಡತೊಡಗಿತು. ದೊಡ್ಡ ಮಗುವಿಗೆ ಮಾತ್ರ ಮೊದಲಿದ್ದ ಸ್ಪಿರಿಟ್ ಯಾಕೋ ಕಡಿಮೆಯಾದಂತಿತ್ತು. ಅದು ಒಂದೇ ಒಂದು ಡೈರಿಮಿಲ್ಕ್ಗೆ ಮೊರೆ ಹೋಗಿತ್ತು ಅಷ್ಟೆ.
ಬದುಕು ಎಂಥ ಡ್ರಾಸ್ಟಿಕ್ ಚೇಂಜ್ಗೆ ಒಳಗಾಗಿದೆ ಅಲ್ವಾ? ನಾವು ಚಿಕ್ಕವರಿದ್ದಾಗ ಐದು ಪೈಸೆಗೆ ಐದು ಶುಂಠಿ ಪೆಪ್ಪರ್ ಮಿಂಟ್ ಸಿಕ್ಕಿದರೆ ಅದೇ ಭಾಗ್ಯ. ಅದನ್ನೇ ಎಲ್ಲಿ ಬೇಗ ಕರಗಿ ಹೋಗುತ್ತದೋ ಅಂತ ಸ್ವಲ್ಪ ಚೀಪಿ ಇನ್ನು ಸ್ವಲ್ಪವನ್ನ ಅಂಗಿ ತುದಿಯಲ್ಲಿ ಒರೆಸಿ ಚಡ್ಡಿ ಜೇಬಲ್ಲಿ ಇಟ್ಟುಕೊಳ್ಳುತಿದ್ವಿ. ಈಗಿನ ಮಕ್ಕಳಿಗೆ ಅಂತ ಕೊರತೆಯಿಲ್ಲ. ಲಿಮಿಟ್ಟುಗಳೂ ಇಲ್ಲ. ಬಯಸಿದ್ದು ಕ್ಷಣದಲ್ಲೇ ಬೊಗಸೆಯಲ್ಲಿ ಸಿಗುತ್ತದೆ. ಸಿಗದೇ ಹೋಗಿರುವುದು ನಮಗೆ ಸಿಕ್ಕಿತಲ್ಲ ಆ ಮಜಬೂತಾದ ಬಾಲ್ಯ.
ಆ ವಿಷಯದಲ್ಲಿ ನಾವು ಭಾಗ್ಯವಂತರೇ!
ಏನಂತೀರಿ?

Monday, May 25, 2009

ದಿಸ್ ಈಸ್ ರೈ









ಆತ್ಮೀಯರೇ
ನಿಮಗೆ ಗೊತ್ತಿದೆ, ಪ್ರಕಾಶ್ ರೈ ಸಿಗುವುದೇ ಅಪರೂಪ. ಅಷ್ಟು ಬಿಜಿ ಬಿಜಿ ಬಿಜಿ ನಟ. ಆದರೆ ಅಷ್ಟು ಬಿಜಿಯ ನಡುವೆಯೂ ಬದುಕನ್ನ ಉಲ್ಲಾಸವಾಗಿಟ್ಟುಕೊಂಡವರು ರೈ. ಅವರ ಮಾತು ಕೇಳಿದರೆ ಇನ್ನಷ್ಟು ಹೊತ್ತು ರೈ ಮಾತಾಡಬಾರದಿತ್ತಾ ಅನಿಸುತ್ತದೆ. ಹೇಳಬೇಕೆಂದ್ರೆ ನಮಗಿಂತ ಚೆನ್ನಾಗಿ ಕನ್ನಡ ಮಾತಾಡುತ್ತಾರೆ. ಅವರೇ ಒಂದು ಕಡೆ ಹೇಳಿದ್ದು ನೆನಪಿದೆ. ನಾನು ಯಾವುದೇ ಕಡೆ ಹೋದರೂ ಅಲ್ಲಿನವರಿಗಿಂತ ಚೆನ್ನಾಗಿ ಆ ಭಾಷೆಯನ್ನು ಮಾತಾಡಬಲ್ಲೆ ಅಂತ. ಅದು ತಮಿಳಾಗಿರಲಿ, ತೆಲಗಾಗಿರಲಿ, ಇಂಗ್ಲಿಷ್ ಆಗಿರಲಿ, ಸೈ. ಭಾಷೆ ಅವರಿಗೆ ಅಷ್ಟು ಸುಲಲಿತ. ಕಮಷರ್ಿಯಲ್ ಮತ್ತು ಆಟರ್್ ಸಿನೆಮಾ ಯಾವುದಾದರೂ ಆಗಲಿ ಅವರ ಅಭಿನಯ ಕೂಡ ಫಕ್ಕಾ ಪ್ರೊಫೆಷನಲ್. ನಾಗಮಂಡಲ ಮರೆಯೋದಕ್ಕೆ ಸಾಧ್ಯಾನಾ?
ಇಲ್ಲಿ ಒಂದಷ್ಟು ರೈ ಅವರ ಫೋಟೋ ತೆಗೆದಿದ್ದೇನೆ. ಪತ್ರಕರ್ತ ಮಿತ್ರ ಮಣಿಕಾಂತ್ ಅವರ ಅಮ್ಮ ಹೇಳಿದ ಎಂಟು ಸುಳ್ಳುಗಳು ಪುಸ್ತಕ ಬಿಡುಗಡೆಗೆ ಬಂದಿದ್ದರಲ್ಲ ಅವಾಗ ತೆಗೆದದ್ದು. ಕಲಾಕ್ಷೇತ್ರದ ಹಿಂಬದಿಯ ಅರಳಿ ಕಟ್ಟೆಯ ಮೇಲೆ ರೈ ಪವಡಿಸಿದ್ರು. ಜೊತೆಗೆ ಬಿ ಸುರೇಶ್ ಇದ್ರು. ನಾನಿದ್ದೆ. ಇನ್ನೂ ಹಲವು ಪತ್ರಕರ್ತ ಮಿತ್ರರೂ ಇದ್ರು. ಈ ಫೋಟೋಸ್ ಟಿಪಿಕಲ್ ರೈ ಅಂದ್ರೆ ಹೀಗಿರುತ್ತಾರೆ ಅಂತಿರ್ತೀವಲ್ಲ ಹಂಗಿದೆ.
ನಿಮಗೆ ಇಷ್ಟ ಆಗುತ್ತೆ ಅಂದುಕೊಳ್ಳುತ್ತೇನೆ.

Friday, May 15, 2009

ಟಿಪಿಕಲ್ ದೇವನೂರು




ನನಗೆ ಇನ್ನೂ ಚೆನ್ನಾಗಿ ನೆನಪಿದೆ.
ದೇವನೂರು ಮಹಾದೇವರನ್ನ ನಾನು ಮೊದಲ ಸಲ ನೋಡಿದ್ದು. ಮಹಾರಾಜ ಕಾಲೇಜಿನಲ್ಲಿ ಓದುವಾಗ ನನ್ನ ಗುರುಗಳೂ ಆತ್ಮೀಯರೂ ಆದ ಮೈಸೂರು ಲತಾ ಮೇಡಮ್ ಇದ್ದರು. ನನ್ನಲ್ಲೇನಾದ್ರೂ ಚೂರು ಪಾರು ಕವಿತೆಯ ಗಂಧ ಇದೆ ಅಂತ ಆದರೆ ಅದಕ್ಕೆ ಕಾರಣ ಲತಾ ಅವರೆ. 'ಬರೀತಾ ಇರು. ನಿಲ್ಲಿಸಬೇಡ' ಅಂತ ಬೆನ್ನುತಟ್ಟಿದವರೂ ಅವರೇ. ಒಮ್ಮೆ ದೆಹಲಿಯ ಪೊಯಿಟ್ರಿ ಸೊಸೈಟಿ ಆಫ್ ಇಂಡಿಯಾದವರು ಪೊಯಿಟ್ರಿ ವಕರ್್ ಶಾಪ್ ಅಂತ ಮಾಡಿದ್ರು. ಐದು ದಿನಾನೋ ಏನೋ ಇರಬೇಕು ನೆನಪಿಲ್ಲ. ಎನ್ಸಿಇಆರ್ಟಿ ಕ್ಯಾಂಪಸ್ನಲ್ಲಿ. ಅಲ್ಲಿನ ಮಲಯಾಳಂ ಹುಡುಗೀರ ಸೌಂದರ್ಯಕ್ಕೆ ಫಿದಾ ಆಗಿದ್ದು ಆವಾಗಲೇ. ಎನ್ಸಿಇಆರ್ಟಿಯಲ್ಲಿ ಇಂಗ್ಲೀಷ್ ರೀಡರ್ ಆಗಿದ್ದ ಎನ್ ಎಸ್ ರಘುನಾಥ್ ಆ ಶಿಬಿರದ ಸಂಚಾಲಕರಾಗಿದ್ರು. ಅದೊಂದು ಮರೆಯಲಾರದ ವಕರ್್ಶಾಪ್. ಅಲ್ಲಿ ಭಾಗವಹಿಸಿದ್ದ ತುಂಬಾ ಜನ ಗೆಳೆಯ ಗೆಳತಿಯರು ಇವತ್ತಿಗೂ ಸಂಪರ್ಕದಲ್ಲಿದ್ದಾರೆ. ಬಹುತೇಕರು ಜರ್ನಲಿಸ್ಟ್ಗಳೆ.
ಆ ವಕರ್್ಶಾಪ್ನಿಂದ ಬಂದ ಮೇಲೆ ನನ್ನ ಕವನದ ಖದರೇ ಬದಲಾಗಿ ಹೋಯಿತು. ಅದನ್ನು ಗಮನಿಸಿದ ಲತಾ ಅವರು 'ಪರವಾಗಿಲ್ಲ ಕಣೋ ವಕರ್್ಶಾಪ್ಗೆ ಹೋಗಿದ್ದೂ ಸಾರ್ಥಕ ಆಯ್ತು. ನಿನ್ನ ಕವಿತೆಯಲ್ಲಿ ಬದಲಾವಣೆ ಆಗಿದೆ' ಅಂದಿದ್ದರು. ಚಂಪಾ, ಎಲ್ ಬಸವರಾಜು, ಜಿ ಹೆಚ್ ನಾಯಕ್, ಪ್ರಭುಶಂಕರ್, ವಿಜಯಾ ದಬ್ಬೆ ಮುಂತಾದವರನ್ನೆಲ್ಲ ನೋಡಿದ್ದೂ ಅಲ್ಲೆ. ಅಲ್ಲಿಂದ ಬಂದ ಮೇಲೆ ಕಾಲೇಜಿನ ಕಾವ್ಯವಾಚನ ಸ್ಪಧರ್ೆಯಲ್ಲಿ ನನಗೆ ಮೊದಲ ಬಹುಮಾನ ಬಂತು.
ಹೀಗಿರುವಾಗಲೇ ಒಂದಿನ ಲತಾ ಮೇಡಮ್ ಹೇಳಿದ್ರು. 'ನೀನು ದೇವನೂರರನ್ನ ನೋಡಬೇಕು ಅಂದಿದ್ಯಲ್ಲ. ಸಂಜೆ ಹೋಗೋಣ. ಅವರು ಗಾಂಧಿಭವನಕ್ಕೆ ಬರುತ್ತಾರೆ. ಅಲ್ಲಿ ರಾಮ್ದಾಸ್ ಒಂದು ಇಂಟರ್ಕ್ಯಾಸ್ಟ್ ಮದುವೆ ಮಾಡಸ್ತಿದಾರೆ' ಅಂದ್ರು. ನನಗೆ ಖುಷಿ. ದೇವನೂರರನ್ನು ನೋಡಬಹುದಲ್ಲ ಅಂತ.
ಅಲ್ಲಿ ಹೋದ್ರೆ ಸಣ್ಣದೊಂದು ಸಮಾರಂಭ ಅದು. ರಾಮ್ದಾಸ್ ಇದ್ದರು. ದೇವನೂರು ಬಂದ್ರು. ನೋಡಿ ಅವಾಕ್ಕಾಗಿ ಹೋದೆ ನಾನು. ಒಡಲಾಳದಂತಹ, ಕುಸುಮಬಾಲೆಯಂತಹ ಮೌಲಿಕ ಕೃತಿ ಬರೆದದ್ದು ಈ ಮನುಷ್ಯನಾ?
ಅದೇ ಕಾಡ್ರಾಯ್ ಪ್ಯಾಂಟ್, ಇಸ್ತ್ರೀ ಇಲ್ಲದ ಕಾಟನ್ ಶಟರ್್, ಹಳೇ ಚಪ್ಲಿ. ಬಾಚದ ತಲೆ, ಅಥವಾ ಆ ತಲೆ ಬಾಚಿದರೂ ಹಾಗೇ ಇರುತ್ತೆ ಅನ್ನುವುದು ನನ್ನ ಅನಿಸಿಕೆ. ಟಿಪಿಕಲ್ ದೇವನೂರ ಮಹಾದೇವ. 'ಮೇಡಮ್ ಇವರಾ?' ಅಂದೆ. 'ಎಷ್ಟು ಸಿಂಪಲ್ ಆಗಿದಾರೆ ನೋಡು' ಅಂದ್ರು.
ಆಮೇಲೆ ಅವರನ್ನು ನಾನು ಅವಾಗವಾಗ ನೋಡತೊಡಗಿದೆ. ಕೆಲವು ಸಲ ಲೂನಾದಲ್ಲಿ ನಮ್ಮ ಕಾಲೇಜಿನ ಮುಂದೇನೆ ಹಾದು ಹೋಗ್ತಿದ್ರು.
ಅದಾಗಿ ಎಷ್ಟೋ ದಿನಗಳ ನಂತರ ನಾನು ಒಂದು ಪ್ರಿಂಟಿಂಗ್ ಪ್ರೆಸ್ನಲ್ಲಿ ಕೆಲಸ ಮಾಡುತ್ತಿದ್ದೆ. ಬಡತನ ಕೆಲಸ ಮಾಡುವುದನ್ನು ಕಲಿಸಿತ್ತು. ಪ್ರೆಸ್ನಲ್ಲಿ ದೇವನೂರರ ಒಡಲಾಳ ಪ್ರಿಂಟಾಗುತ್ತಿತ್ತು. ಬಹುಶಃ ಅದು ಯಾವುದೋ ವಿಶ್ವವಿದ್ಯಾನಿಲಯಕ್ಕೆ ಟೆಕ್ಸ್ಟ್ಬುಕ್ ಆಗಿತ್ತು ಅನಿಸುತ್ತೆ. ನಾನಾಗಲೇ ಅವರನ್ನು ಓದಿಕೊಂಡಿದ್ದೆ. ಮೆಚ್ಚಿಕೊಂಡಿದ್ದೆ.
ಒಂದಿನ ಇದ್ದಕ್ಕಿದ್ದಂತೆ ನಮ್ಮ ಪ್ರೆಸ್ಸಿಗೆ ಬಂದರು. ಅದದೇ ಗೆಟಪ್. ಕೈಯಲ್ಲೊಂದು ಸಿಗರೇಟ್. ಕಡುಗಪ್ಪಿನ ಗಡ್ಡ.
ಬಂದವರೇ ಪುಸ್ತಕ ಕೊಡಿ ಅಂತ ದೊಡ್ಡ ಟೇಬಲ್ ಮೇಲೇನೆ ಕೂತರು. ಕೊಟ್ಟೆ. ನಮ್ಮ ಓನರ್ ಇರಲಿಲ್ಲ. ಚೆನ್ನಾಗಿ ಮಾಡ್ತಿದೀರಿ ಕಣ್ರಯ್ಯಾ. ಅಂದರು. ನಾನು ನನ್ನ ಪರಿಚಯ ಹೇಳಿಕೊಂಡೆ. ಖುಷಿಯಾಯ್ತು ಅವರಿಗೆ. ಸರ್ ನಿಮ್ಮ ಕುಸುಮಬಾಲೆ ಒಂದು ಕಾಪಿ ಇದ್ರೆ ಕೊಡಿ. ಹುಡುಕಿ ಹುಡುಕಿ ಸಾಕಾಯ್ತು ಅಂದೆ. ಮುಂದಿನ ಸಲ ತರ್ತೀನಿ ಅಂದ್ರು. ಹಾಗನ್ನುತ್ತಲೇ ಮತ್ತೊಂದು ಸಿಗರೇಟು ಹಚ್ಚಿ ಕೂತರು. ಹಣ ಕೊಡಲು ಬಂದರು. ನಾನು ಬೇಡ ಸಾರ್ ಅಂದೆ. ಚೆನ್ನಾಗಿ ಮಾಡ್ತಿದೀರಿ. ಏನಾದರೂ ತಿಂಡಿ ತರಿಸ್ಕೊಂಡು ತಿನ್ನಿ ಅಂದರು. ಎಷ್ಟೇ ಬೇಡವೆಂದರೂ ಬಿಡಲಿಲ್ಲ. ಅವರ ಒತ್ತಾಯಕ್ಕೆ ಮಣಿದು ಪಡೆದುಕೊಂಡೆ. ವಿಷಯ ಏನಂದ್ರೆ ನನ್ನನ್ನ ಬಿಟ್ಟರೆ ಅಲ್ಲಿದ್ದ ಉಳಿದ ಇಬ್ಬರೂ ತಮಿಳರು. ಅವರಿಗೆ ದೇವನೂರರ ಬಗ್ಗೆ ಏನೆಂದರೆ ಏನೂ ಗೊತ್ತಿಲ್ಲ. ಅಷ್ಟರಲ್ಲಿ ನಮ್ಮ ಓನರ್ ಮಹಾಶಯ ಬಂದ. ದೇವನೂರರು ಸ್ವಲ್ಪ ಹೊತ್ತು ಕುಳಿತಿದ್ದು ಹೊರಟರು.
ಅವರು ಹೋದ ಮೇಲೆ ನಮ್ಮ ಓನರ್ ಕೇಳಿದ.
'ನೀನಾದರೂ ಹೇಳಬಾರದೇನಯ್ಯಾ ಸಿಗರೇಟ್ ಸೇದಬೇಡಿ ಅಂತ'.
'ನಾನೇಗೆ ಹೇಳಲಿ ಸಾರ್, ಅಷ್ಟು ದೊಡ್ಡವರಿಗೆ. ನೀವೇ ಹೇಳಬಹುದಿತ್ತಲ್ಲ. ನೀವು ಬಂದಮೇಲೂ ಸಿಗರೇಟ್ ಸೇದುತ್ತಿದ್ರಲ್ಲ' ಅಂದೆ.
'ಹೋಗಲಿ ಬಿಡು. ಇನ್ನೊಮ್ಮೆ ಬಂದಾಗ ಸರ್ ಪ್ರೆಸ್ನಲ್ಲಿ ಸಿಗರೇಟ್ ಸೇದೋ ಹಾಗಿಲ್ಲ ಅನ್ನು. ಪೇಪರ್ ಜಾಸ್ತಿ ಇರುತ್ತಲ್ಲ. ಬೆಂಕಿ ಬಿದ್ರೆ ಕಷ್ಟ ಅಂತ ಹೇಳು' ಅಂದ್ರು.
ಆಯ್ತು ಅಂದೆ.
ಅವರು ಮತ್ತೆ ಬರಲಿಲ್ಲ. ನಾನೋ ಬದುಕು ಅರಸಿಕೊಂಡು ಬೆಂಗಳೂರಿನ ಹಾದಿ ಹಿಡಿದೆ.
ಇದೆಲ್ಲ ಯಾಕೆ ನೆನಪಾಯ್ತು ಅಂದ್ರೆ ನಿನ್ನೆ ಅವರ ಒಡಲಾಳ ನಾಟಕ ನೋಡಿ ಬಂದೆ. ತುಂಬಾ ಖುಷಿ ಆಯ್ತು. ಉಮಾಶ್ರೀ ಸಾಕವ್ವನ ಪಾತ್ರಕ್ಕೆ ಜೀವ ತುಂಬಿದ್ದರು. ಬೆಳಕೂ ನೈಜವಾಗಿತ್ತು. ಎಲ್ಲಾ ಓಕೆ. ಆದರೆ ಇಡೀ ನಾಟಕದಲ್ಲೇನೋ ಕೊರತೆ ಇದೆ ಅನಿಸ್ತು. ಅದು ಭಾಷೆಯದ್ದು. ಸಾಮಾನ್ಯವಾಗಿ ದೇವನೂರರ ಭಾಷೆ ಸ್ವಲ್ಪ ಕಷ್ಟಾನೆ. ಆದರೆ ನನ್ನಂಥವರಿಗೆ ಅದು ತುಂಬಾನೆ ಇಷ್ಟ. ಆ ಭಾಷೆಯ ಸೊಗಡೇ ಅಂಥದ್ದು. ಪ್ರಾದೇಶಿಕವಾದ ಆ ಭಾಷೆಗೆ ಅದರದೇ ಆದ ಒಂದು ಗುಣವಿದೆ. ಲಾಲಿತ್ಯವಿದೆ. ಅದನ್ನು ಸರಿಯಾಗಿ ಬಳಸಿಕೊಂಡಿದ್ರೆ ನಾಟಕ ಇನ್ನಷ್ಟು ಪ್ರಬುದ್ಧವಾಗ್ತಿತ್ತೇನೋ ಅನಿಸ್ತು.
ಇವತ್ತಿಗೂ ನನ್ನ ಅಚ್ಚುಮೆಚ್ಚಿನ ಲೇಖಕ ದೇವನೂರು. ಮೈಸೂರು ಕಡೆ ಹೋದಾಗ ಒಮ್ಮೆ ಅವರ ತೋಟದ ಕಡೆಗೆ ಹೋಗಿಬರೋಣ ಅಂದುಕೊಂಡಿದ್ದೇನೆ.
ನೋಡೋಣ.

Sunday, May 10, 2009

ವೇಗ






ನನಗೆ ಅವಳ ಪರಿಚಯ ಆಗಿದ್ದು ಇಂಟನರ್ೆಟ್ ಚಾಟ್ ಮೂಲಕ.
ಸಿಕ್ಕ ಮೂರೇ ನಿಮಿಷದಲ್ಲಿ ಗತಕಾಲದ ಫ್ರೆಂಡ್ಸ್ನಂತಾಗಿಬಿಟ್ಟಿದ್ದೆವು. ನಾನೋ ಮೊದಲೇ ಮಹಾನ್ ತರಲೆ. ಅವಳೂ ಅಂತವಳೇ! ನಿನಗಿಂತ ನಾನೇನು ಕಡಿಮೆ ಅನ್ನುವಂತೆ ಬುರಬುರನೆ ಮಾತಾಡತೊಡಗಿದಳು. ನನ್ನ ತುಂಟತನ ಕೆಲವೊಮ್ಮೆ ಅವಳಲ್ಲಿ ನಗು ಉಕ್ಕಿಸುತ್ತಿತ್ತು.
ಅವಳು ವೇಗ.
ಆಕರ್ುಟ್ನಲ್ಲಿ ಅವಳ ಪ್ರೊಫೈಲ್ ಸಿಗಬಹುದೇನೋ ಅಂತ ಹುಡುಕಾಡಿದೆ. ಊಹುಂ ಸಿಗಲಿಲ್ಲ. ಆದರೆ ನಾನು ಆನ್ಲೈನ್ಗೆ ಹೋದಾಗಲೆಲ್ಲ ಅವಳು ಫಕ್ಕನೆ ಸಿಗುತ್ತಿದ್ದಳು. ನಾನು ಎಂಟ್ರಿ ಆದಕೂಡಲೇ ಹಾಯ್ ತುಂಟ ಅನ್ನೋ ಅವಳ ಶಬ್ದ ಕಣ್ಣಿಗೆ ರಾಚುತಿತ್ತು. ಯಾರಿರಬಹುದು ಇವಳು?
ದಿನೇ ದಿನೇ ಚಾಟ್ ಮಾಡುತ್ತ ಹೋದ ಹಾಗೆ ನನಗೆ ಅವಳ ಮೇಲೆ ಅದೆಂಥದೋ ಸೆಳೆತ ಶುರುವಾಗಿಬಿಟ್ಟಿತು. ರಜೆಯಲ್ಲಿದ್ದಾಗಲಂತೂ ಚಡಪಡಿಸಿಹೋಗುತ್ತಿದ್ದೆ.
ಹೀಗಿರುವಾಗಲೇ,
ನೀವು ಸಖತ್ ಹ್ಯಾಂಡಸಮ್ ಆಗಿ ಇದ್ದೀರಿ! ಅಂತ ಒಂದಿನ ಚಾಟ್ ಮಾಡಿದಳು.
ಇದ್ಯಾಕೋ ಸ್ವಲ್ಪ ಅತಿಯಾಯ್ತು ಅನಿಸೋಲ್ವ? ಅಂದೆ.
ಕಿಸ್ಸಕ್ಕನೆ ನಕ್ಕಳು.
ನಾನು ಆಕರ್ುಟ್ನಲ್ಲಿ ಹಾಕಿದ್ದ ಫೋಟೊ ಕೋತಿಯದ್ದು.
ಆಮೇಲೆ ಮೊಬೈಲ್ ನಂಬರ್ ಬೇಕು ಅಂದಳು. ಕೊಟ್ಟೆ. ಅವಳೇ ಫೋನ್ ಮಾಡಿದಳು. ನಿಮ್ಮ ಬಗ್ಗೆ ಕೇಳಿದ್ದೇನೆ. ಅಷ್ಟು ಚಂದಕ್ಕೆ ಹೇಗೆ ಬರೀತೀರಾ? ಎಲ್ಲಿ ಸಿಗುತ್ತವೆ ಆ ವಿಷಯಗಳೆಲ್ಲ? ಅಂದಳು. ನಾನು ನಿಮ್ಮ ಫ್ಯಾನ್ ಗೊತ್ತಾ? ಅಂದಳು.
ಯಾವ ಫ್ಯಾನ್? ಕೇತಾನಾ? ಉಷಾನಾ?ಅಂದೆ.
ಮತ್ತೆ ಕಿಸ್ಸಕ್ಕನೇ ನಗು.
ಪರಸ್ಫರ ಮಾತು, ಎಸ್ಸೆಮ್ಮೆಸ್ಸುಗಳ ಭರಾಟೆ ಶುರುವಾಯ್ತು. ಮಾತುಕತೆ ಚಾಟ್ನಿಂದ ಮೊಬೈಲ್ಗೆ ಶಿಫ್ಟ್ ಆಗಿತ್ತು. ಗಂಟೆಗಟ್ಟಲೆ ಹರೀತು. ವೇಗಳ ವಾಯ್ಸ್ ತುಂಬಾ ಸ್ವೀಟ್ ಆನಿಸ್ತಿತ್ತು.
ಮರುಳಾದೆ.
ಅದೇನು ವೇಗ ಅಂತ ಇಟ್ಟುಕೊಂಡಿದ್ದೀರಾ?
ನನ್ನೆಸರು ಸುಭದ್ರಾ ಅಂತ. ಎಲ್ಲರೂ ಸುಬ್ಬಿ ಸುಬ್ಬಿ ಅನ್ನೋರು. ನನಗ್ಯಾಕೋ ಅದು ಹಿಡಿಸಲಿಲ್ಲ. ಇದನ್ನ ಒಮ್ಮೆ ಅಪ್ಪನಿಗೆ ಹೇಳಿದಾಗ ಅಪ್ಪ ಹೇಳಿದ್ರು. ನೀನು ಅತ್ಯಂತ ಚೂಟಿ ಹುಡುಗಿ ಅಲ್ವ!. ತುಂಬ ವೇಗವಾಗಿ ಎಲ್ಲವನ್ನೂ ಗ್ರಹಿಸಿಕೊಳ್ತೀಯ. ವೇಗ ಅಂತಿಟ್ಕೋ ಅಂದ್ರು. ನನಗೇನೋ ಆ ಹೆಸರು ಕೇಳಿದ ತಕ್ಷಣ ಓಕೆ ಡಿಫರೆಂಟ್ ಆಗಿದೆ ಅನಿಸ್ತು. ಇರಲಿ ಅಂದೆ, ಅಂದಳು.
ಗುಡ್. ಚೆನ್ನಾಗಿದೆ. ತಂಗಿ ಇದಾಳಾ?
ಹ್ಞೂಂ ಇದಾಳೆ.
ಅವಳಿಗೆ ಸ್ಲೋ ಅಂತ ಇಡಿ.
ಮತ್ತೆ ಕಿಸ್ಸಕಿಸ್ಸಕ್ಕನೆ ನಗು.
ಓಕೆ, ನೀನು ಹೇಗಿದೀರಾ ನೋಡಲು? ಅಂದೆ.
ಕೆಟ್ಟದಾಗಿದ್ದೇನೆ!
ಪರವಾಗಿಲ್ಲ ಒಂದು ಫೋಟೋ ಕಳಿಸಿ?
ಅದೊಂದು ಮಾತ್ರ ಕೇಳಬೇಡಿ. ನಿಮ್ಮ ಫೋಟೋ ಕೂಡ ನನಗೆ ಬೇಡ. ಒಮ್ಮೆ ಭೇಟಿಯಾದ ಮೇಲೆ ಬೇಕಾದ್ರೆ ಅದೆಲ್ಲ ಆಗಲಿ ಅಂದಳು.
ಬಲವಂತ ಮಾಡುವುದು ಬೇಡ ಅಂತ ಸುಮ್ಮನಾದೆ.
***
ಅವತ್ತು ಭಾನುವಾರ. ಬೆಳಿಗ್ಗೆ.
ಇವತ್ತು ಭೇಟಿ ಆಗೋಣ ಅನಿಸ್ತಿದೆ. ಸಂಜೆ ಐದಕ್ಕೆ ಮೆಜೆಸ್ಟಿಕ್ನ ಸಂಗಮ್ ಟಾಕೀಸ್ ಎದುರಿಗೆ ನಾನು ನಿಂತಿರುತ್ತೇನೆ. ಬರ್ತೀರಾ? ಅಂದಳು ವೇಗ.
ನನ್ನಲ್ಲಿ ಅವಳನ್ನು ಭೇಟಿ ಆಗುವ ಎಕ್ಸೈಟ್ಮೆಂಟ್ ಇನ್ನೂ ಕಡಿಮೆ ಆಗಿರಲಿಲ್ಲ.
ಆಯ್ತು. ಬರ್ತೇನೆ. ಆದ್ರೆ ಇಬ್ಬರೂ ಪರಸ್ಫರ ಗುರುತು ಹಿಡಿಯೋದು ಹೇಗೆ?
ನಾನು ಆಕಾಶ ಬಣ್ಣದ ಚೂಡಿ ಹಾಕಿರ್ತೇನೆ. ನೀವು? ಅಂದಳು.
ನಾನು ಗುಲಾಬಿ ಬಣ್ಣದ ಶಟರ್್.
ಓಕೆ ಡನ್ ಅಂದಳು.
ನಾಲ್ಕೂವರೆಗೆಲ್ಲ ನನ್ನ ರೂಮು ಬಿಟ್ಟಿದ್ದೆ. ಆದರೆ ನಾನು ಹಾಕಿಕೊಂಡಿದ್ದು ಮೊಲದ ಬಿಳುಪಿನ ಶಟರ್್.
ಸುಮ್ಮನೆ ಒಂದು ಸಪ್ರರ್ೈಸ್ ಕೊಡೋಣ ಅನ್ನಿಸಿ ಹಾಗೆ ಮಾಡಿದ್ದೆ.
ಸರಿಯಾಗಿ ಐದು ಗಂಟೆ ಮೂರು ನಿಮಿಷ ಮುವತ್ತೊಂಬತ್ತು ಸೆಕೆಂಡಿಗೆ ನಾನು ಸಂಗಮ್ ಟಾಕೀಸಿನ ಎದುರಿಗೆ ನಿಂತಿದ್ದೆ.
ಜನ ತುಂಬಾ ಇದ್ದರು. 'ಹಾಗೆ ಸುಮ್ಮನೆ' ಏಳುವರೆ ಶೋ ಗೆ ಜನ ಮುಗಿ ಬೀಳುತ್ತಿದ್ರು.
ಐದು ಗಂಟೆ ಐದು ನಿಮಿಷ ಇಪ್ಪತ್ತೆಂಟು ಸೆಕೆಂಡಿಗೆ ಸರಿಯಾಗಿ ಅವಳು ಬಂದಳು. ಅದೇ ಆಕಾಶ ಬಣ್ಣದ ಚೂಡಿ. ಮುಡಿಯಲ್ಲಿ ಮೊಳದುದ್ದ ಮಲ್ಲಿಗೆ. ನನ್ನ ಕಣ್ಣನ್ನ ನಾನೇ ನಂಬದಾದೆ. ನನ್ನ ಪಕ್ಕದಲ್ಲೇ ಬಂದು ನಿಂತುಕೊಂಡಳು. ದೇವರೆ ನಾನು ಮಾತಾಡುತ್ತಿದ್ದ ಹುಡುಗಿ ಇವಳೇನಾ? ಇಷ್ಟು ಸುಂದರವಾಗಿಯೂ ಹುಡುಗೀರು ಇರ್ತಾರಾ?
ಟೈಮ್ ಪ್ಲೀಸ್ ಅಂದಳು. ತಡವರಿಸುತ್ತಾ ಐದು ಹತ್ತು ಅಂದೆ.
ಥ್ಯಾಂಕ್ಸ್ ಅಂದಳು. ನನ್ನ ಕಣ್ಣು ಅವಳನ್ನು ಬಿಟ್ಟು ಕದಲಲಿಲ್ಲ.
ಆದರೇ ಅವಳ ಕಣ್ಣು ಮಾತ್ರ ನನ್ನ ಬರುವಿಕೆಯನ್ನೇ ಅರಸುತ್ತಿದ್ದವು.
ನನ್ನ ಮನಸ್ಸೇಕೋ ನೀನು ನೋಡಿದ್ರೆ ಹೀಗಿದೀಯ. ಅವಳು ನೋಡಿದ್ರೆ ಅಷ್ಟು ಚಂದಕ್ಕಿದ್ದಾಳಲ್ಲೋ. ನಿನ್ನ ಕೆಟ್ಟ ಮುಖ ಅವಳಿಗೆ ಹ್ಯಾಗೋ ತೋರಿಸ್ತೀಯ. ಬೇಡ ಬಿಡು ಅಂದಂಗಾತು.
ಗಂಟೆ ಐದೂ ಕಾಲಾಯ್ತು. ಐದೂವರೆ ಆಯ್ತು. ಫೋನ್ ಮಾಡತೊಡಗಿದಳು ನನಗೆ.
ಅಯ್ಯೋ ಫೋನ್ ಮಾಡ್ತಿದಾಳಲ್ಲ, ರಿಂಗಾದ್ರೆ ಅಂತ ಗಾಬರಿಯಿಂದ ಜೇಬಿಗೆ ಕೈ ಹಾಕಿದರೆ! ಎಲ್ಲಿದೆ ಫೋನ್? ಬರುವ ಗಡಿಬಿಡಿಯಲ್ಲಿ ರೂಮಿನಲ್ಲೇ ಮರೆತು ಬಂದಿದ್ದೆ.
ನಿಜಕ್ಕೂ ಅವಳಿಗೆ ಸಿಟ್ಟು ಬಂದಿತ್ತು. ಈ ಹುಡುಗರೆ ಹೀಗೆ, ಛೇ ಅಂತೇನೋ ಗೊಣಗಿಕೊಂಡದ್ದು ಸಣ್ಣಗೆ ಕೇಳಿಸಿತು. ಮುಖದಲ್ಲಿ ಗಲಿಬಿಲಿ.
ಫೋನ್ ಮಾಡುತ್ತಲೇ ಇದ್ದಳು. ನನ್ನ ಕಡೆ ಒಮ್ಮೆ ತಿರುಗಿ ನೋಡಿದಳು. ನಾನು ಆಕಾಶದತ್ತ ನೋಡಿದೆ.
ಅವಳ ಚಡಪಡಿಕೆ ನನಗೆ ನೋಡಲಾಗಲಿಲ್ಲ.
ಇನ್ನು ಇಲ್ಲಿ ನಿಲ್ಲುವುದು ಬೇಡ ಅನ್ನಿಸಿ ವೇಗವಾಗಿ ಅಲ್ಲಿಂದ ಹೆಜ್ಜೆ ಕಿತ್ತೆ.

Friday, May 8, 2009

ಮಧುವನ ಕರೆದರೆ

ಮಧುವನ ಕರೆದರೆ
ತನುಮನ ಸೆಳೆದರೆ
ಶರಣಾಗು ನೀನು ಆದರೆ...
ಅದ್ಯಾವ ಅಮೃತ ಘಳಿಗೆಯಲ್ಲಿ ಈ ಹಾಡು ಕೇಳಿದೆನೋ ಗೊತ್ತಿಲ್ಲ ಅವಾಗಿನಿಂದ ಒಂದೇ ಸಮನೆ ಮಧುವನವನ್ನ ಕೇಳುತ್ತಿದ್ದೇನೆ.
ನಾನು ಒಂಥರಾ ಹಾಗೆ. ಒಂದು ಹಾಡು ಇಷ್ಟ ಆಗುತ್ತೆ ಅಂದ್ರೆ ಅದನ್ನೇ ಎಗ್ಗಿಲ್ಲದೇ ಕೇಳುತ್ತೇನೆ. ನೀವು ಅದಕ್ಕಿಂತ ಚಂದಕ್ಕಿದೆ ಕೇಳಿ ಅಂತ ನೂರು ಹಾಡು ಕೊಟ್ಟರೂ ನನಗೆ ಕೇಳಿಸೊಲ್ಲ. ನನಗೆ ನನ್ನದೇ ಹಾಡು. ನನ್ನದೇ ಪಾಡು. ಅದರ ಪಸೆ ಆರಿ, ಇನ್ನು ಸಾಕು ಅನ್ನುವ ತನಕ ಅದು ಕೇವಲ ನನ್ನ ಹಾಡು. ಗುಂಗು ಹಿಡಿಸಿರುತ್ತದೆ. ಅಂದಹಾಗೆ ಮಧುವನ ಇಂತಿ ನಿನ್ನ ಪ್ರೀತಿಯ ಚಿತ್ರದ್ದು. ಬರೆದವರು ನನ್ನ ಪ್ರೀತಿಯ ಗೆಳೆಯರೂ ಲೇಖಕರೂ ಆದ ಜಯಂತ್ ಕಾಯ್ಕಿಣಿ ಅವರು. ವಾಣಿ ಅದ್ಭುತವಾಗಿ ಹಾಡಿದ್ದಾರೆ.
ಈಗೊಂದಿಷ್ಟು ವರ್ಷದ ಹಿಂದೆ ಎಂ ಡಿ ಪಲ್ಲವಿಯವರು ಎದೆ ತುಂಬಿ ಹಾಡುವೆನು ಕಾರ್ಯಕ್ರಮದಲ್ಲಿ "ನೀನಿಲ್ಲದೇ ನನ್ನದೇನಿದೆ" ಅನ್ನುವ ಭಾವಗೀತೆಯೊಂದನ್ನ ಹಾಡಿದ್ದರು. ನನಗೆ ಆ ಹಾಡು ಎಷ್ಟು ಹುಚ್ಚು ಹಿಡಿಸಿಬಿಡ್ತು ಅಂದ್ರೆ ಅದನ್ನ ಎಷ್ಟೋ ದಿನಗಳ ತನಕ ಎಡೆಬಿಡದೇ ಕೇಳಿದ್ದೆ. ಅದರಲ್ಲೂ ಎಂ ಡಿ ಪಲ್ಲವಿಯವರ ದನಿಯಲ್ಲಿ ಆ ಹಾಡನ್ನು ಕೇಳುವುದೇ ಒಂದು ಸೊಬಗು.
ಕೆಲವು ಹಾಡು ಮಾತ್ರ ಆ ಥರದ ಗುಂಗು ಹಿಡಿಸಿಬಿಡುತ್ತವೆ. ಅವರು ಹಾಡಿದ್ದಾರೆ ಅಂತ ಆ ಹಾಡಿಗೆ ಅಷ್ಟು ತೂಕ ಬಂತಾ ಅಥವಾ ಆ ಹಾಡು ಹಾಡಿದ್ದರಿಂದಲೇ ಹಾಡಿದವರಿಗೊಂದು ತೂಕ ಬಂತಾ? ಗೊತ್ತಿಲ್ಲ.
ಬಟ್ ಎರಡೂ ಹೌದು.
ರತ್ನಮಾಲಾ ಪ್ರಕಾಶ್ ಹಾಡಿದ ಮೊದಲ ದಿನ ಮೌನ ಅಳುವೇ ತುಟಿಗೆ ಬಂದಂತೆ... ಅರ್ಚನಾ ಉಡುಪಾ ಅವರ ಕರುಣಾಳೆ ಬಾ ಬೆಳಕೆ... ಪುತ್ತೂರು ನರಸಿಂಹ ನಾಯಕ್ ಅವರ ದಾಸರ ಪದಗಳು, ಮೈಸೂರು ಅನಂತ ಸ್ವಾಮಿಯವರ ರತ್ನನ್ ಪದಗಳು, ಯಾವ ಮೋಹನ ಮುರಳಿ ಕರೆಯಿತೋ, ಅಶ್ವಥ್ ಅವರ ಕೋಡಗಾನ ಕೋಳಿ ನುಂಗಿತ್ತಾ... ಒಂದಾ ಎರಡಾ. ಕೇಳಿದರೆ ಯಾವತ್ತಿಗೂ ದಣಿಯದ ಹಾಡುಗಳವು.
ಕೇಳಿದ್ದರೂ ಕೇಳದಿದ್ದರೂ ಮಧುವನ ಕರೆದರೆ ಇನ್ನೊಮ್ಮೆ ಕೇಳಿ ನೋಡಿ.
ಅದರ ಗಮ್ಮತ್ತೇ ಬೇರೆ.

Tuesday, April 28, 2009

ಕಾಮಿ ಕವಿತೆಗಳು



ಪ್ರಿಯರೇ ಹೀಗ್ಯಾಕೆ ಬರೆಯಬೇಕೆನಿಸಿತೋ ನನಗೆ ಗೊತ್ತಿಲ್ಲ. ಸುಮ್ಮನೆ ಕುಳಿತಿದ್ದವನ ಕೈ ಹಿಡಿದು ಬರೆಸಿಕೊಂಡ ಪುಟ್ಟ ಪುಟ್ಟ ಸಾಲುಗಳಿವು. ಯಾಕೆ, ಏನು ಅಂತ ಕೇಳಬೇಡಿ. ಸುಮ್ಮನೆ ಓದಿಕೊಳ್ಳಿ. ಹಾಗೇ ಇಷ್ಟ ಆಗಿರಲಿ, ಆಗದೇ ಇರಲಿ ಪ್ರತಿಕ್ರಿಯಿಸಿ.




1
ಮುಟ್ಟು ಅಂದರೂ ಮುಟ್ಟಲ್ಲ
ಸುಮ್ಮನೆ ಆಸೆಪಡುತ್ತೀಯಲ್ಲ
ಒಮ್ಮೆ ಕೈ ತಾಕಿಸು ಗೆಳೆಯ
ಎದೆಯ ಪುಟಗಳಿಗೆ
ಸುಗ್ಗಿ ಬರಲಿ

1
ನೀನು ಮಲಗಿದೆ
ನಾನೂ ಮಲಗಿದೆ
ಎಚ್ಚರಾದಾಗಲೇ ಗೊತ್ತಾಗಿದ್ದ
ನಮ್ಮ ನಡುವೆ ಮತ್ತೊಬ್ಬನಿದ್ದ
ಕಾಮಿ

3
ನೀನು ಏನನ್ನೂ ಬಿಚ್ಚಬೇಡ
ಸುಮ್ಮನೆ ಬಚ್ಚಿಟ್ಟಿಕೋ
ಬಟಾ ಬಯಲಾಗುವುದೂ ಕೂಡ
ಕೆಲವೊಮ್ಮೆ ಬೋರ್ ಹೊಡೆಸುತ್ತದೆ.

4
ಇವತ್ಯಾಕೋ
ನೀನು ಬೇಕೆನಿಸುತ್ತಿದೆ
ಬಂದು ಹೋಗೋ
ಮೈಗೆ ಸೋಲುವುದು ಗೊತ್ತಿದ್ದಂತೆ
ಸುಖಕ್ಕೆ ತೇಲುವುದು ಗೊತ್ತಿದೆ
ಅವೆರಡನ್ನೂ ಕಲಿಸುತ್ತೇನೆ

5
ನನ್ನ ಪಾದದ ಕಿರುಬೆರಳಿಗೂ
ನಿನ್ನ ನೆನಪಿದೆ ಕಣೋ
ಕಚ್ಚಿದ
ಗುರುತು ಮಾಸಿ ಹೋಗಿಲ್ಲ
ಇವತ್ತಾದರೂ ಬಂದು
ಮುಲಾಮು ಹಚ್ಚಬಾರದಾ?

6
ನೀನು ಏನೋ ಹುಡುಕಿದೆ?
ನಾನು ಏನೋ ತಡಕಿದೆ?
ಗೊತ್ತಿಲ್ಲ, ಆದರೆ
ಇಬ್ಬರಲ್ಲೂ ಏನೋ ಸಿಕ್ಕ ಖುಷಿ ಇದೆ

7
ಏನೂ ಬೇಡ
ಸುಮ್ಮನೆ ತಬ್ಬಿಕೋ!

Friday, April 24, 2009

ದಿ ಪೇಯ್ನ್



ಪ್ರಿಯ ಸ್ನೇಹಿತರೆ
ಇದು ಕೆಲವು ವಾರಗಳ ಹಿಂದೆ ಹಾಯ್ ಬೆಂಗಳೂರ್ ಪತ್ರಿಕೆಯಲ್ಲಿ ಪ್ರಕಟವಾದ ಕಥೆ.
ಮತ್ತೆ ಇಲ್ಲಿ ನಿಮಗಾಗಿ ಹಾಕುತ್ತಿದ್ದೇನೆ. ಓದಿಕೊಳ್ಳಿ





ಕಿಟಕಿ ತೆರೆದೇ ಇತ್ತು.
ದೂರದಲ್ಲಿ ಯಾರದೋ ಒಕ್ಕಳಾಳದಿಂದ ಎದ್ದು ಬಂದ ಸಣ್ಣದೊಂದು ಆಲಾಪ್. ಅದು ನೋವಿನ ಎಳೆ ಎಂದು ಗುರುತಿಸಿಕೊಳ್ಳುವುದಕ್ಕೆ ಪ್ರಿಯಾಗೆ ಸಮಯ ಹಿಡಿಯಲಿಲ್ಲ.
ಮಗ್ಗಲು ಬದಲಿಸಿದಳು. ಸಣ್ಣಗೆ ಕೆಮ್ಮು ಬಂದು ಉಸಿರು ಹಿಂಡಿದಂಗಾಯಿತು. ಕತ್ತು ಆನಿಸಿದಳು. ಉಫ್. ಒಂದು ನಿಡಿದಾದ ಉಸಿರಿಗಾಗಿ ಎಷ್ಟು ಪರದಾಡಬೇಕು?
ಥತ್...ಇನ್ನೂ ಯಾಕೆ ಬದುಕಿದ್ದೀನಿ ನಾನು? ಬದುಕು ಅನ್ನುವುದು ಕೇವಲ ಇಪ್ಪತ್ತೊಂದನೇ ವಯಸ್ಸಿಗೆ ಈ ಪರಿ ಮಕ್ಕಾಡೆ ಮಲಗಿಬಿಡುತ್ತದೆ ಅಂತ ನಾನು ಎಂದಾದರೂ ಭಾವಿಸಿದ್ದೆನಾ? ಎಷ್ಟು ಬೇಗ ನನ್ನೆಲ್ಲ ದಾರಿಗಳು ಮುಚ್ಚಿಹೋದುವಲ್ಲ. ಕನಸುಗಳು ಕಳೆದುಹೋದವು. ಮನಸ್ಸು ನಿಲರ್ಿಪ್ತವಾಯಿತು. ನಿದ್ರೆ ದೂರಾಯಿತು. ನೋವು ದಿನ ಕಳೆದಂತೆ ಅಭ್ಯಾಸವಾಗಿ ಹೋಯಿತು. ಪ್ರತಿ ಕ್ಷಣ ಕೂಡ ನಾನು ಸಾವಿಗೆ ಹತ್ತಿರಾಗುತ್ತಿದ್ದೇನೆ ಅನಿಸುತ್ತಿದೆ. ಸಾವು ಇಷ್ಟು ಯಾತನಾಮಯವಾಗಿರುತ್ತಾ? ಇನ್ನು ಎಷ್ಟು ನಿಮಿಷವೋ, ಎಷ್ಟು ವಾರವೋ, ಎಷ್ಟು ತಿಂಗಳೋ ನನ್ನ ಈ ಉಸಿರು.
ಪ್ರಿಯಾ ಬಳಿಗೆ ಬಂದ ನಸರ್್ ಯಾವುದೋ ಮಾತ್ರೆ ಕೈಗಿಟ್ಟು ನುಂಗಿ ಅನ್ನುವಂತೆ ಸನ್ನೆ ಮಾಡಿದಳು. ಅವಳ ಹೆಸರು ಪಾರ್ವತಿ. ಕೇರಳದಿಂದ ಬಂದವಳಂತೆ. ಕನ್ನಡ ಕಲಿತಿದ್ದಾಳೆ. ಹಾಸ್ಪಿಟಲ್ಗೆ ಬಂದ ದಿವಸದಿಂದ ನನ್ನ ಆರೈಕೆ ಮಾಡುತ್ತಿರುವ ಅಮ್ಮನಂಥವಳು. ಅವಳ ಪ್ರೀತಿ ದೊಡ್ಡದು. ನೀವು ಇಷ್ಟು ಚೆನ್ನಾಗಿದ್ದೀರಾ? ಆ ದೇವರು ನಿಮಗೆ ಯಾಕೆ ಈ ಕ್ಯಾನ್ಸರ್ ಅನ್ನೋ ಕಾಯಿಲೆ ಕೊಟ್ಟ ಸಿಸ್ಟರ್. ಅವನಿಗೆ ಚೆನ್ನಾಗಿರೋರನ್ನ ನೋಡಿದ್ರೆ ಆಗೊಲ್ಲ. ಪಕ್ಕಾ ಈಡಿಯಟ್ ಅವನು. ನನ್ನ ಅಕ್ಕನಿಗೂ ಹೀಗೆ ಆಗಿತ್ತು. ಅವಳೂ ನಿಮ್ಮಷ್ಟೇ ಚಂದಕ್ಕಿದ್ದಳು. ಏನೇ ಪ್ರಯತ್ನ ಮಾಡಿದರೂ ಅವಳನ್ನು ಮರೆಯೋದಕ್ಕೆ ಆಗುತ್ತಾ ಇಲ್ಲ. ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇವೆ ಅನಿಸುತ್ತೆ ಅಂತ ಒಂದಿನ ಕಣ್ಣು ತುಂಬಿಕೊಂಡಿದ್ದಳು. ಅವಳಿಗೂ ಗೊತ್ತು ನಾನು ಹೆಚ್ಚು ದಿನ ಬದುಕೊಲ್ಲ ಅಂತ. ಏನೂ ಆಗೊಲ್ಲ ಸಿಸ್ಟರ್. ಒಂದಿನ ನೀವು ಹುಷಾರಾಗೇ ಆಗ್ತೀರ. ಡೋಂಟ್ ವರಿ ಅಂತ ಕೈ ಹಿಡಿದು ಸಾಂತ್ವನ ಹೇಳುತ್ತಾಳೆ. ಅದೆಲ್ಲ ನನ್ನ ಮೇಲಿನ ಪ್ರೀತಿಗಾಗಿ ಅಷ್ಟೆ.
ನಾನು ಕಣ್ಣೀರಾಗುತ್ತೇನೆ. ಪಾರ್ವತಿ ಕೈ ನನ್ನ ನೆತ್ತಿ ಸವರುತ್ತದೆ.
ಪಕ್ಕದ ರೂಮಿನಲ್ಲಿ ಯಾರೋ ಕಿರುಚಿದರು. ಅದೇನು ಕೊನೆಯ ಆರ್ತನಾದವಾ? ಕಳಕೊಂಡವರ ದುಃಖವಾ? ಆಸ್ಪತ್ರೆ ಅನ್ನುವುದು ನರಕ ಕೂಪಗಳಿದ್ದ ಹಾಗೆ! ಇಲ್ಲಿಗೆ ಜನ ಸಾಯಲಿಕ್ಕೆಂದೇ ಬರುತ್ತಾರಾ? ಓಹ್... ಅಮ್ಮ ಬರಬಹುದು ಈಗ. ನನಗೆ ಅಂತ ಅವಳು ಹಾಲು ತರುತ್ತಾಳೆ. ಎಂತೆಂಥದೋ ಹಣ್ಣು ತರುತ್ತಾಳೆ. ಮಗಳು ಬದುಕಿಯಾಳು ಅನ್ನುವ ಸಣ್ಣ ಭರವಸೆ ಅವಳಲ್ಲಿ ಮಾತ್ರ ಗಟ್ಟಿಯಾಗಿದೆ. ಯಾಕೆಂದ್ರೆ ಅವಳು ತಾಯಿ. ಯಾವ ತಾಯಿ ತಾನೆ ಮಗಳು ತನ್ನ ತೊಡೆಯ ಮೇಲೇ ಸಾಯುವುದನ್ನ ಇಷ್ಟಪಟ್ಟಾಳು. ನಿನಗೆ ಏನೂ ಆಗೊಲ್ಲ ಮಗಳೆ. ಡಾಕ್ಟರು ಹೇಳಿದ್ದಾರೆ. ಈಗೇನು ಎಂಥ ಕ್ಯಾನ್ಸರನ್ನೂ ಗುಣ ಪಡಿಸಬಹುದಂತೆ. ಅದರಲ್ಲೂ ಡಾ. ಸುರೇಶ್ ಪಾಟೀಲ್ ತುಂಬಾ ಫೇಮಸ್ ಆದಂಥವರು. ಅವರು ನಿಮ್ಮ ಮಗಳಿಗೆ ಏನೂ ಆಗೋದಿಲ್ಲ ಅಂತ ಹೇಳಿದ್ದಾರೆ. ನೀನು ಧೈರ್ಯ ಗೆಡಬೇಡ ಮಗಳೇ, ಅಂತ ಅಮ್ಮ ಹೇಳುತ್ತಿರುತ್ತಾಳೆ. ಅವಳಿಗೂ ಗೊತ್ತು ನನ್ನ ಮಗಳು ಬದುಕೋಲ್ಲ ಅಂತ. ಆದರೂ ನನ್ನ ಮೇಲಿನ ಪ್ರೀತಿಗಾಗಿ ಹಾಗೆ ಹೇಳುತ್ತಾಳೆ. ಅಪ್ಪ ಇದ್ದಿದ್ದರೆ ಅಮ್ಮನಿಗಿಂತ ಹೆಚ್ಚು ಸಂಕಟ ಪಡುತ್ತಿದ್ದನೇನೋ. ಇದನ್ನೆಲ್ಲ ನೋಡಬೇಕಾಗುತ್ತೆ ಅಂತ ಮೊದಲೇ ಹೋಗಿಬಿಟ್ಟ. ಡೋಂಟ್ ವರಿ ಡ್ಯಾಡಿ ಇನ್ನೇನು ಕೆಲವೆ ದಿನ ನಾನು ನಿನ್ನಲ್ಲಿಗೆ ಬರುತ್ತೇನೆ.
ಅಮ್ಮ ಸರಸ್ವತಿ ಬಂದರು.
ಬರುವಾಗಲೇ ಕಣ್ಣ ತುಂಬಾ ನೀರು. ಮಗಳಿಗೆ ಗೊತ್ತಾದೀತು ಅಂತ ಸಣ್ಣಗೆ ತಿರುಗಿ ಸೀರೆ ಸೆರಗಿನಿಂದ ಒರೆಸಿಕೊಂಡರು.
ಸೇಬು ತಿನ್ನು ಮಗಳೇ!
ಅಮ್ಮ ನಾನು ಅಂದ್ರೆ ನಿನಗೆ ಅಷ್ಟಿಷ್ಟಾನಾ?
ಯಾಕೆ ಹಾಗೆಲ್ಲ ಕೇಳ್ತೀಯ?
ಅಲ್ಲ ನಾನು ಸತ್ತು ಹೋದ್ರೆ ನೀನು ಎಷ್ಟು ಸಂಕಟ ಪಡ್ತೀ ಅಂತ ನನಗೆ ದಿಗಿಲಾಗಿದೆ!
ಸರಸ್ವತಿಗೆ ದುಃಖ ತಡೆಯಲಾಗಲಿಲ್ಲ. ಮಗಳನ್ನು ಬಾಚಿ ತಬ್ಬಿಕೊಂಡರು.
ದೇವರೆ ಎಷ್ಟು ಅಂತ ದುಃಖ ಕೊಡುತ್ತೀ. ಗಂಡನನ್ನ ಕಿತ್ತುಕೊಂಡೆ. ಆದರೂ ನಾನು ಬದುಕಿದೆ, ಅದು ನನ್ನ ಮಗಳಿಗಾಗಿ. ಅವಳು ಚೆನ್ನಾಗಿರಬೇಕು ಅಂತ ನಾನು ಮಾಡಿದ ಕೆಲಸ, ಪಟ್ಟ ಯಾತನೆ ಇದೆಯಲ್ಲ ಅದು ಬೇರೆ ಯಾವ ತಾಯಿಗೂ ಬೇಡ. ಇದ್ದದ್ದೊಂದು ಮನೆ ಬೆಳಕಿನಂತವಳು ಮಗಳು. ಈಗ ಅವಳನ್ನು ಕಿತ್ತುಕೊಳ್ಳಲು ಹೊರಟಿದ್ದೀಯಲ್ಲ. ಮುಂದೆ ನಿನಗೆ ಯಾವತ್ತೂ ನಾನು ಕೈ ಮುಗಿಯಲಾರೆ, ದೀಪ ಹಚ್ಚಲಾರೆ. ಇದ್ದೊಂದು ದೀಪವನ್ನೂ ನೀನೇ ಆರಿಸಿದ ಮೇಲೆ ನನಗೆ ಇನ್ನೆಲ್ಲಿದೆ ಬದುಕು.
ಸರಸ್ವತಿಯ ದುಃಖ ಇನ್ನೂ ಬತ್ತಿರಲಿಲ್ಲ.
ಯಾರೋ ಹೆಗಲ ಮೇಲೆ ಕೈ ಇಟ್ಟಂತಾಯಿತು. ತಿರುಗಿದರೆ ಅದೇ ಹುಡುಗ.
ನೀನಾ?
ಆ್ಯಂಟಿ. ಹಾಗನ್ನುವ ಮೊದಲೇ ಅವನ ಕಣ್ಣು ತುಂಬಿಬಂತು. ಹೀಗೆ ಕೇಳಿದೆ ಪ್ರಿಯಾಳಿಗೆ ಹುಷಾರಿಲ್ಲ ಅಂತ. ನೋಡಿ ಹೋಗೋಣ ಅಂತ ಬಂದೆ. ಅವಳಿಗೆ ಏನೂ ಆಗೊಲ್ಲ ಆ್ಯಂಟಿ. ದೇವರಿದ್ದಾನೆ.
ಎಲ್ಲಿದ್ದಾನೆ ದೇವರು. ನನ್ನ ಪಾಲಿಗೆ ಅವನು ಯಾವತ್ತೋ ಸತ್ತು ಹೋದ. ಹೇಗೆ ಭರಿಸಲಿ ಈ ದಃಖವನ್ನ? ಸರಸ್ವತಿಯ ಕಣ್ಣು ಅತ್ತು ಅತ್ತು ಬತ್ತಿಹೋದ ಕೊಳದಂತಾಗಿದ್ದವು.
ವಿಕಾಸ್ ಹೋಗಿ ಪ್ರಿಯಾಳ ಪಕ್ಕ ಕುಳಿತ. ಕೈ ಹಿಡಿದುಕೊಂಡ.
ಡೋಂಟ್ ವರಿ ನಾನಿದ್ದೇನೆ. ನಿನಗೆ ಏನೂ ಆಗೊಲ್ಲ.
ಯಾಕೆ ಹಾಗಂತೀಯ ವಿಕಿ. ನೀನೂ ಸುಳ್ಳು ಹೇಳ್ತೀಯಲ್ಲ ಅನ್ನಬೇಕೆನಿಸಿತು ಪ್ರಿಯಾಳಿಗೆ.
ಸುಮ್ಮನೆ ಅವನ ಕೈ ಅದುಮಿದಳು ಅಷ್ಟೆ.
ಎಂಥ ಹುಡುಗ ಇವನು. ನನಗಾಗಿ ಪ್ರಾಣ ಬೇಕಾದ್ರೆ ಕೊಡ್ತೀನಿ ಅಂದಿದ್ದ ಒಮ್ಮೆ. ಹುಚ್ಚಾ ಅದೆಲ್ಲ ಯಾಕೆ, ನಿನ್ನನ್ನ ಪ್ರೀತಿ ತಾನೆ ಮಾಡಬೇಕು. ಮಾಡ್ತೀನಿ ಬಿಡು ಅಂದಿದ್ದೆ ನಾನು. ಅವತ್ತು ಅವನಷ್ಟು ಖುಷಿ ಪಟ್ಟವರನ್ನ ನಾನು ಈ ಜನ್ಮದಲ್ಲಿ ಕಂಡಿಲ್ಲ. ಮುಗಿಲೇ ಎಟಕುವಷ್ಟು ಜಿಗಿದಾಡಿದ್ದ. ನನ್ನ ಕರೆದುಕೊಂಡು ಊರೆಲ್ಲ ಸುತ್ತಿಸಿದ್ದ. ಕೇಳಿದ್ದೆಲ್ಲ ಕೊಡಿಸಿದ್ದ. ಒಂದೇ ಒಂದಿನ ನನ್ನ ಪ್ರೀತಿಯನ್ನಲ್ಲದೇ ಬೇರೆ ಏನನ್ನೂ ಬಯಸದ ಹುಡುಗ. ಪ್ಲೆಟಾನಿಕ್ ಪ್ರೀತಿ ಅಂತಾರಲ್ಲ ಅಂಥದು.
ಆಮೇಲೆ ಕೆಲಸದ ಮೇಲೆ ಮುಂಬೈಗೆ ಅಂತ ಹೊರಟು ಹೋದ. ವರ್ಷದ ಮೇಲಾಯಿತು. ಅಲ್ಲ ಕಣೋ ನೀನು ಅಲ್ಲಿ ನಾನು ಇಲ್ಲಿ. ಹೇಗಪ್ಪ ಪ್ರೀತಿ ಅಂದ್ರೆ ದೂರ ಇದ್ದಷ್ಟು ಪ್ರೀತಿ ಜಾಸ್ತಿ ಕಣೆ. ಹತ್ತಿರ ಅದರಲ್ಲೂ ತೀರಾ ಹತ್ರ ಇದ್ರೆ ಪ್ರೀತಿಗೆ ಕಾಮದ ವಾಂಛೆ ಬಂದುಬಿಡುತ್ತೆ. ನಾನು ಬರುವುದಕ್ಕೆ ಇನ್ನೂ ಒಂದು ವರ್ಷ ಆಗಬಹುದು. ಅಲ್ಲಿವರೆಗೂ ನಿನಗೆ ತಾಳ್ಮೆ ಇದ್ದರೆ ಕಾಯಿ. ಇಲ್ಲ ಅಂದ್ರೆ ಒಳ್ಳೆ ಹುಡುಗ ಸಿಕ್ಕಿದ್ರೆ ಮದುವೆ ಆಗಿಬಿಡು. ನಾನು ಪ್ರಾಕ್ಟಿಕಲ್ ಮನುಷ್ಯ. ಯಾರಿಗಾಗೋ ಕಾಯುತ್ತಾ ಕೂತು ಬದುಕನ್ನ ವ್ಯರ್ಥ ಮಾಡಿಕೊಳ್ಳುವುದರಲ್ಲಿ ಅರ್ಥ ಇಲ್ಲ ಪ್ರಿಯಾ ಅಂತ ಫೋನ್ ಮಾಡಿದ್ದ.
ಅವತ್ತೇ ನನಗೆ ಗೊತ್ತಾಗಿದ್ದು ಇವನು ನನ್ನ ಬುದ್ಧಿಗೆ ಮೀರಿದ ಹುಡುಗ ಅಂತ.
ಅದಾದ ಮೇಲೆ ನಮ್ಮಿಬ್ಬರದು ಸಂಪರ್ಕವೇ ಇಲ್ಲ.
ಈಗ ನೋಡಿದ್ರೆ ಪಕ್ಕದಲ್ಲೇ ಬಂದು ಕುಳಿತಿದ್ದಾನೆ. ಪ್ರೀತಿಗೆ ಅಷ್ಟೊಂದು ಸೆಳೆತವಿದೆಯಾ?
ಪ್ರಿಯಾಳ ಕಣ್ಣು ಮತ್ತೆ ಹನಿಗೂಡಿದವು.
ಏನನ್ನೋ ಹೇಳಲು ಹೊರಟ ವಿಕಾಸ್ ಅವಳ ಕಣ್ಣೊರೆಸಿದ.
ಮತ್ತೆ ಮತ್ತೆ ಹನಿಗೂಡುತ್ತಿದ್ದ ಕಣ್ಣನ್ನು ಒರೆಸುವುದಾದರೂ ಯಾಕೆ?
ಪ್ರಿಯಾ ಅವನ ಮುಖ ನೋಡಲಿಕ್ಕಾಗದೆ ಚಡಪಡಿಸಿದಳು.
***
ಡಾಕ್ಟರ್ ಪ್ರಿಯಾಳ ಸ್ಥಿತಿ ಹೇಗಿದೆ?
ಎದುರಿಗೆ ಕುಳಿತ ಸುರೇಶ್ ಪಾಟೀಲರು ಕ್ಷಣ ಮೌನವಾದರು.
ಅವಳನ್ನು ಬದುಕಿಸಿಕೊಡಲಿಕ್ಕೆ ಆಗಲ್ಲವಾ ಡಾಕ್ಟರ್? ವಿಕಾಸ್ ಡಾಕ್ಟರ್ರ ಕೈ ಹಿಡಿದುಕೊಂಡ.
ಪ್ಲೀಸ್ ಡಾಕ್ಟರ್. ಅದಕ್ಕೋಸ್ಕರ ನಾನು ಏನು ಮಾಡಬೇಕು ಹೇಳಿ?
ಸುರೇಶ್ ಪಾಟೀಲ್ರ ಕಣ್ಣು ತುಂಬಿಬಂತು. ಇಷ್ಟು ವರ್ಷದಲ್ಲಿ ಎಂಥೆಂತ ಕ್ಯಾನ್ಸರ್ ಕೇಸ್ಗಳನ್ನು ನೋಡಿಲ್ಲ ನಾನು .ಇದರಷ್ಟು ಕರಳು ಹಿಂಡಿದ್ದು ಮತ್ತೊಂದಿಲ್ಲ. ಯಾಕೋ ಪ್ರಿಯಾ ಬದುಕಬೇಕು ಅನಿಸುತ್ತೆ. ಆದ್ರೆ ಅವಳು ಬದುಕುವ ಯಾವ ಕುರುಹೂ ಇಲ್ಲ. ಕ್ಯಾನ್ಸರ್ ಅವಳನ್ನು ಅಷ್ಟು ಆವರಿಸಿಕೊಂಡುಬಿಟ್ಟಿದೆ.
ಐ ಯಾಮ್ ಸಾರಿ ಮಿಸ್ಟರ್ ವಿಕಾಸ್. ಪ್ರಿಯಾ ಬದುಕಲಾರದಷ್ಟು ದೂರ ಹೊರಟುಹೋಗಿದ್ದಾಳೆ. ಅವಳಿಗೆ ಲಂಗ್ ಕ್ಯಾನ್ಸರ್. ಉಸಿರಾಟ ಈಸಿಯಾಗಿ ಆಗೊಲ್ಲ. ನೋವಿಗೆ ಮಾಫರ್ಿನ್ ಕೊಡುತ್ತಿದ್ದೇವೆ. ಅದನ್ನು ನಿಲ್ಲಿಸಿದರೆ ಅವಳಿಗೆ ನೋವು ತಡೆದುಕೊಳ್ಳಲು ಕಷ್ಟ್ಲ. ಮಾಫರ್ಿನ್ ಕೊಡೋದರಿಂದ ಅವಳ ಇತರೆ ಆರ್ಗನ್ಗಳಿಗೂ ತೊಂದರೆ ಆಗಿದೆ. ಬಿಲೀವ್ ಮಿ, ಅವಳನ್ನ ಇನ್ನು ಮರೆತುಬಿಡೋದು ಒಳ್ಳೇದು.
ಅವರ ಕಣ್ಣಂಚಿನಿಂದ ಜಾರಿದ ಹನಿಯೊಂದು ವಿಕಾಸ್ನ ಮುಂಗೈ ಬೇಲೆ ಬಿತ್ತು.
ಪ್ಲೀಸ್ ಇನ್ನೊಂದೇ ಒಂದು ಚಾನ್ಸ್ ನೋಡಿ ಡಾಕ್ಟರ್!
ಇಲ್ಲ ವಿಕಾಸ್. ಇರುವಷ್ಟು ದಿನ ಅವಳಿಗೆ ಒಂದು ಕಂಫಟರ್್ ಕೊಡಿ. ನನಗೂ ಅವಳು ಬದುಕಬೇಕು ಅನಿಸುತ್ತಿದೆ. ಬಟ್ ಐಯಾಮ್ ಹೆಲ್ಪ್ಲೆಸ್. ಸಾರಿ ಅಂತ ಎದ್ದರು.
ವಿಕಾಸ್ ಕುಸಿದುಹೋದ. ಹಾಗಾದರೆ ಇನ್ನೆಷ್ಟು ದಿನ ಪ್ರಿಯಾಳ ಈ ಯಾತನಾ ಬದುಕು.
ಡಾಕ್ಟರ್ ಒಂದು ನಿಮಿಷ ಪ್ಲೀಸ್.
ಮತ್ತೆ ಸುರೇಶ್ ಪಾಟೀಲ್ ಕುಳಿತರು.
ನಾನೊಂದು ನಿಧರ್ಾರಕ್ಕೆ ಬಂದಿದ್ದೇನೆ.
ಏನು?
ನಾನು ಪ್ರಿಯಾಳನ್ನು ಮದುವೇ ಆಗಬೇಕೆಂದಿದ್ದೇನೆ.
ವಾಟ್?
ಹೌದು. ಅವಳು ನನ್ನ ಹೃದಯದ ಹುಡುಗಿ. ಅಂಥ ಹುಡುಗಿಯನ್ನ ನಾನು ಮತ್ತೆಲ್ಲಿಯೂ ಕಾಣಲಾರೆ. ಅವಳು ನನಗೆ ಮಾತ್ರ ಹುಟ್ಟಿ ಬಂದಿದ್ದವಳು. ನನ್ನ ಬದುಕಿನ ಮುದುವೆಯ ಅಧ್ಯಾಯವೂ ಅವಳು ಬದುಕಿರುವಾಗಲೆ ಮುಗಿದುಹೋಗಲಿ.
ಒಮ್ಮೆ ಯೋಚಿಸಿ ನಿಧರ್ಾರ ತೆಗೆದುಕೊಂಡರೆ ಒಳಿತು. ಅವಳಿರುವ ಸ್ಥಿತಿಯಲ್ಲಿ ಅದೆಲ್ಲ ಬೇಕಾ? ಒಪ್ಪುತ್ತಾಳಾ?
ನಾನು ಒಪ್ಪಿಸುತ್ತೇನೆ. ಇದು ನನ್ನ ಮತ್ತು ಅವಳ ವೈಯಕ್ತಿಕ ನಿಧರ್ಾರ. ಅದಕ್ಕೆ ಪಮರ್ಿಷನ್ ಕೊಡಬೇಕು ನೀವು.
ಆಯಿತು. ನಾನೇ ಎಲ್ಲಾ ವ್ಯವಸ್ಥೆ ಮಾಡಿಸುತ್ತೇನೆ. ನಿನ್ನ ಮನಸ್ಸು ದೊಡ್ಡದು. ನೀನು ನಮ್ಮೆಲ್ಲರ ಮುಂದೆ ಗ್ರೇಟ್ ಆಗಿಬಿಟ್ಟಿರಿ ವಿಕಾಸ್. ದೇವರು ಈಡಿಯಟ್ ಅಂತ ನನಗೆ ಈಗ ಅನಿಸುತ್ತಿದೆ. ಅವಳು ಬದುಕಿರಬೇಕಿತ್ತು ವಿಕಾಸ್ ... ಬದುಕಿರಬೇಕಿತ್ತು. ಅವರ ಕಣ್ಣಾಲಿಗಳು ತುಂಬಿಬಂದವು.
ಎದ್ದು ಸರಸರನೆ ಹೊರಟುಹೋದರು.
***
ಅಮ್ಮ ನಾನು ಪ್ರಿಯಾಳನ್ನು ಮದುವೆ ಆಗುತ್ತಿದ್ದೇನೆ.
ಅವಳಿಗೆ ಕ್ಯಾನ್ಸರ್ ಇದೆ ಅಂತಿದ್ರು.
ಗೊತ್ತಿದ್ದೇ ಮದುವೆ ಆಗಬೇಕು ಅಂತಿದ್ದೀನಿ ಮಮ್ಮಿ. ಅವಳು ಇನ್ನು ಹೆಚ್ಚೆಂದರೆೆ ಎಷ್ಟು ದಿನ ಬದುಕುತ್ತಾಳೋ ಗೊತ್ತಿಲ್ಲ. ಆದ್ರೆ ಅವಳು ಮುತ್ತೈದೆ ಆಗಿಯೇ ಹೋಗಲಿ ಅನ್ನೋದು ನನ್ನ ಇಷ್ಟ. ಇದಕ್ಕೆ ನಿನ್ನ ಒಪ್ಪಿಗೆ ಬೇಕು.
ವಿಕಾಸ್ನ ಅಮ್ಮ ಶಾರದಾಗೆ ಮಗ ಎಂಥವನು ಅಂತ ಗೊತ್ತು. ಅವನ ಮನಸ್ಸು ಎಂಥದು ಅಂತ ಗೊತ್ತು. ಒಂದೇ ಒಂದು ದಿನ, ಕ್ಷಣ ಇನ್ನೊಬ್ಬರಿಗೆ ಕೇಡಾಗಲಿ ಅಂತ ಬಗೆದವನಲ್ಲ. ಅವನದು ಹೂವಿನಂತಹ ಮನಸ್ಸು. ಆದ್ರೆ ಈಗ ನೋಡಿದ್ರೆ ಪ್ರಿಯಾಳನ್ನೆ ಮದುವೆ ಆಗುತ್ತೇನೆ ಅಂತಿದಾನಲ್ಲ. ಹೇಗೆ ಇದು? ಅರ್ಥವೇ ಆಗುತ್ತಿಲ್ಲ. ಖಡಾಖಂಡಿತವಾಗಿ ಬೇಡ ಅಂದು ಅವನ ಮನಸ್ಸನ್ನು ಹೇಗಾದರೂ ನೋಯಿಸಲಿ.
ಒಮ್ಮೆ ಯೋಚಿಸಿ ನೋಡಿದ್ರೆ ಒಳ್ಳೇದು ಕಣೋ ವಿಕ್ಕಿ. ಪ್ರಿಯಾ ಬದುಕೋಲ್ಲ ಅಂತ ನೀನೇ ಹೇಳ್ತಿದೀಯಾ? ಅವಳು ಹೋದ ನಂತರ ಹೇಗಿರ್ತೀಯಾ?
ಅವಳ ನೆನಪಿನೊಂದಿಗೆ ಮಮ್ಮಿ. ಇದರಲ್ಲಿ ಯೋಚಿಸಿ ನೊಡೋದು ಏನೂ ಇಲ್ಲ. ಇದು ಫೈನಲ್ ಡಿಸಿಷನ್. ಪ್ಲೀಸ್ ನನ್ನ ಬದುಕು ನನಗೆ ಬೇಕಾದ ಹಾಗೆ ರೂಪಿಸಿಕೊಳ್ಳೋದಕ್ಕೆ ಒಂದು ಅವಕಾಶ ಕೊಡಿ ಮಮ್ಮಿ. ಅವಳನ್ನು ನಾನು ನಿನಗಿಂತ ಹೆಚ್ಚಾಗಿ ಪ್ರೀತಿಸುತ್ತಿದ್ದೆ. ಈಗ ಅವಳೇ ಇಲ್ಲವಾದ ಮೇಲೆ ನನಗೆ ಮದುವೆಯ ಸಂತೋಷ ಎಲ್ಲಾ ಯಾಕೆ. ಇದೆಲ್ಲ ಅವಳ ಸಂತೋಷಕ್ಕಾಗಿ. ಪ್ಲೀಸ್ ನನ್ನನ್ನ ತಡೆಯಬೇಡಿ.
ಶಾರದಾ ಅಳು ತಡೆಯಲಾರದೇ ಒಳಕ್ಕೆ ಹೋದರು.
ಇದ್ದೊಬ್ಬ ಮಗನೂ ಹೀಗೆ ಆದ್ರೆ ನನ್ನ ಪಾಡೇನು. ಯಜಮಾನರು ಒಪ್ಪುತ್ತಾರಾ?
ದೇವರೆ ಎಂಥ ಪರೀಕ್ಷೆಗೆ ಒಡ್ಡಿದೆಯಲ್ಲ.
***
ರಾತ್ರಿ ವಿಕಾಸ್ಗೆ ನಿದಿರೆ ಹತ್ತಲಿಲ್ಲ. ಕಣ್ಣು ಮುಚ್ಚಿದರೆ ಸಾಕು ಪ್ರಿಯಾ ಬಂದು ನಿಲ್ಲುತ್ತಿದ್ದಳು. ಹೋಗ್ತೀನಿ ಕಣೋ. ಏನೂ ಅನ್ಕೋ ಬೇಡ. ನನಗೂ ನಿನ್ನ ಜೊತೆ ದಿವಿನಾಗಿ ಬದುಕಬೇಕು ಅನ್ನೋ ಆಸೆ ಇತ್ತು. ನಿಜ್ಜ ಹೇಳ್ತೀನಿ, ನನ್ನ ಬದುಕಿನಲ್ಲಿ ನೀನೊಬ್ಬನಿದ್ದರೆ ನನಗೆ ಅಷ್ಟೇ ಸಾಕಿತ್ತು. ಆದ್ರೆ ಏನು ಮಾಡಲಿ. ನಿನ್ನೊಬ್ಬನನ್ನೇ ಬಿಟ್ಟು ಹೋಗುತ್ತಿದ್ದೇನೆ. ಐ ಯಾಮ್ ಸಾರಿ.
ದಿಂಬು ತೋಯ್ಯುವಷ್ಟು ಅತ್ತ.
ಹಳೆಯ ದಿನಗಳು ನೆನಪಾದವು. ಒಂದಿನ ನನಗೆ ವಿಪರೀತ ಜ್ವರ. ಆಸ್ಪತ್ರೆಗೆ ಅಡ್ಮಿಟ್ ಆಗಿದ್ದೆ. ಒಂದೇ ಒಂದು ದಿನ ಕ್ಲಾಸಿಗೆ ಹೋಗಿರಲಿಲ್ಲ. ಎರಡನೇ ದಿನ ಬಂದವಳು ಯಾಪಾಟಿ ಅತ್ತಿದ್ದಳು ಅಂದ್ರೆ ನೀನಿಲ್ದೆ ನಾನು ಸತ್ತೇಹೋಗ್ತೀನಿ ಕಣೋ ಅಂದಿದ್ದಳು. ಇದೆಂಥ ಹುಚ್ಚು ಪ್ರೀತಿ ಅಂದುಕೊಂಡಿದ್ದೆ ನಾನು. ಆಸ್ಪತ್ರೆಯಲ್ಲಿ ನಾನಿದ್ದ ವಾರವೂ ಅಲ್ಲೇ ಇದ್ದಳು. ಇಡೀ ರಾತ್ರಿ ಕಣ್ಣು ಮುಚ್ಚಿದವಳಲ್ಲ. ನಿನ್ನ ಪ್ರೀತಿಗೋಸ್ಕರ ನಾನು ಇಷ್ಟು ಮಾಡದೇ ಹೋದ್ರೆ ಹೇಗೋ?
ಈಗ ಅದೆ ಪ್ರಿಯಾ ಸಾವಿನ ಕುದುರೆ ಏರಿ ಕುಳಿತಿದ್ದಾಳೆ. ತಡೆದು ನಿಲ್ಲಿಸುವವರು ಯಾರು?
ಟೆರೇಸ್ ಮೇಲಕ್ಕೆ ಹೋದ. ಕತ್ತಲು ಹಾಸಿ ಹೊದ್ದುಕೊಂಡು ಮಲಗಿದ್ದಂತಿತ್ತು.
ಅಲ್ಲೇ ಅಂಗಾತ ಮಲಗಿ ಆಕಾಶ ದಿಟ್ಟಿಸಿದ. ಯಾರೋ ಕರೆದಂಗಾಯಿತು. ನಾನೂ ಪ್ರಿಯಾ ಜೊತೆ ಹೋಗಿಬಿಡಲಾ?
ಮೈ ಬೆವೆತಿತು.
***
ಮೂರು ದಿನ ಕಳೆಯುವಷ್ಟರಲ್ಲಿ ವಿಕಾಸ್ ಪ್ರಿಯಾ ಜೊತೆ ಮದುವೆ ಬಗ್ಗೆ ಮಾತಾಡಿದ. ಅವಳು ನಿಜಕ್ಕು ಖಿನ್ನಳಾದಳು. ಹೇಗಿದ್ರೂ ನಾನು ಸಾಯುವವಳು. ನನಗೇಕೆ ಮದುವೆ. ನಾನು ಹೋದ ಮೇಲೆ ನೀನು ಮದುವೆ ಆಗಿ ಸುಖವಾಗಿರಬೇಕು ಅನ್ನೋದೆ ನನ್ನ ಆಸೆ ಅಂದಳು. ಇವನು ಒಪ್ಪಲಿಲ್ಲ. ಮದುವೆ ಅಂತ ಆದ್ರೆ ಅದು ನಿನ್ನನ್ನೆ. ನನ್ನ ಜೊತೆ ನಿನ್ನನ್ನು ಬಿಟ್ಟು ಬೇರೆ ಯಾರನ್ನೂ ನಾನು ನಿರೀಕ್ಷಿಸಲಾರೆ. ಪ್ಲೀಸ್ ಇದು ನನ್ನ ಕೊನೆ ಬಯಕೆಯೂ ಹೌದು. ಅದು ನಿನ್ನದೂ ಆಗಲಿ ಬಿಡು ಅಂತ ಪರಿಪರಿಯಾಗಿ ಬೇಡಿದ. ಮೂರು ರಾತ್ರಿ ಮೂರು ಹಗಲು ಒತ್ತಾಯಿಸಿದ ಮೇಲೆ ಪ್ರಿಯಾ ಒಪ್ಪಿಕೊಂಡಳು.
ಆ ದಿನವೂ ಬಂತು.
ಪ್ರಿಯಾಳನ್ನು ಆಕ್ಸಿಜನ್ ಕೊಳವೆಯ ಜೊತೆಗೆ ತುಸು ಸಿಂಗಾರ ಮಾಡಲಾಯಿತು.
ತೀರಾ ಸಿಂಪಲ್ ಆಗಿ ಆಸ್ಪತ್ರೆಯ ಅಂಗಳದಲ್ಲೇ ಪ್ರಿಯಾ ಮತ್ತು ವಿಕಾಸ್ ಮದುವೆ ನಡೆದುಹೋಯಿತು.
ಅದು ಪ್ರಿಯಾಳ ಬದುಕಿನ ಸಂತಸದ ಕ್ಷಣವಾ? ದುಃಖದ ಕ್ಷಣವಾ?
ವಿಕಾಸನ ಬದುಕಿನ ಈ ಕ್ಷಣಕ್ಕೆ ಏನಂತ ಹೆಸರಿಡುವುದು?
ಅದಾದ ಸರಿ ಐದನೇ ರಾತ್ರಿ ಪ್ರಿಯಾಳಿಗೆ ಎಚ್ಚರವಾಯಿತು. ವಿಕಾಸ್ ದಡಬಡಾಯಿಸಿ ಎದ್ದ.
ಉಸಿರಾಡಲು ಕಷ್ಟವಾಗ್ತಿದೆ ಕಣೋ ಅನ್ನೋ ರೀತಿ ಸನ್ನೆ ಮಾಡಿದಳು.
ಎದೆಗೊರಗಿಸಿಕೊಂಡ.
ಒಂದೇ ಬಿಕ್ಕು ಅಷ್ಟೆ.
ಇವನ ಕೈಯೊಳಗಿದ್ದ ಅವಳ ಕೈ ತಣ್ಣಗಾಗತೊಡಗಿತು.